37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮವಾದ “ದುಶ್ಚಟಗಳ ವಿರುದ್ಧ ಸ್ವರಕ್ಷಣಾ ಮಾರ್ಗೋಪಾಯಗಳು” ಎಂಬ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನೋವಿಜ್ಞಾನ ಸ್ನಾತಕೋತ್ತರ ಪದವಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಎಸ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ, ‘ನಾವು ಅದೆಷ್ಟೋ ಸಲ ದುಶ್ಚಟಗಳಿಗೆ ನಮಗೆ ತಿಳಿಯದೆಯೇ ಬಲಿಯಾಗುತ್ತಿದ್ದೇವೆ. ನಮ್ಮ ಮೇಲೆ ನಾವೇ ನಂಬಿಕೆ ಇಡುವುದರಿಂದ ನಮ್ಮನ್ನು ನಾವು ಪ್ರೀತಿಸುವುದರಿಂದ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯಬಹುದು. ಆದುದರಿಂದ ನಮ್ಮನ್ನು ನಾವೇ ಅರಿತುಕೊಂಡು ಬಾಳಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಡುಮಡ್ಕ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೆಸರ ರಾಘವ ಗೌಡ ಕುಡುಮಡ್ಕ ವಹಿಸಿದ್ದರು.

ಅತಿಥಿಗಳಾಗಿ ಕೃಷ್ಣಪ್ಪ ಗೌಡ ಹಿರ್ತಡ್ಕ ಇವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸೋಮನಾಥ ಗೌಡ ಮಾಕಳ, ಅಧ್ಯಕ್ಷರು ಶಿಬಿರ ನಿರ್ವಹಣಾ ಸಮಿತಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಬಿರಾರ್ಥಿ ಲತೇಶ್ ನಿರ್ವಹಿಸಿದರು. ಉಪನ್ಯಾಸಕರಾದ ಸುಭಾಷ್ ಚಂದ್ರ ಜೈನ್ ಸ್ವಾಗತಿಸಿ, ರೋಷನ್ ಧನ್ಯವಾದವಿತ್ತರು.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya
error: Content is protected !!