23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮವಾದ “ದುಶ್ಚಟಗಳ ವಿರುದ್ಧ ಸ್ವರಕ್ಷಣಾ ಮಾರ್ಗೋಪಾಯಗಳು” ಎಂಬ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನೋವಿಜ್ಞಾನ ಸ್ನಾತಕೋತ್ತರ ಪದವಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಎಸ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ, ‘ನಾವು ಅದೆಷ್ಟೋ ಸಲ ದುಶ್ಚಟಗಳಿಗೆ ನಮಗೆ ತಿಳಿಯದೆಯೇ ಬಲಿಯಾಗುತ್ತಿದ್ದೇವೆ. ನಮ್ಮ ಮೇಲೆ ನಾವೇ ನಂಬಿಕೆ ಇಡುವುದರಿಂದ ನಮ್ಮನ್ನು ನಾವು ಪ್ರೀತಿಸುವುದರಿಂದ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯಬಹುದು. ಆದುದರಿಂದ ನಮ್ಮನ್ನು ನಾವೇ ಅರಿತುಕೊಂಡು ಬಾಳಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಡುಮಡ್ಕ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೆಸರ ರಾಘವ ಗೌಡ ಕುಡುಮಡ್ಕ ವಹಿಸಿದ್ದರು.

ಅತಿಥಿಗಳಾಗಿ ಕೃಷ್ಣಪ್ಪ ಗೌಡ ಹಿರ್ತಡ್ಕ ಇವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸೋಮನಾಥ ಗೌಡ ಮಾಕಳ, ಅಧ್ಯಕ್ಷರು ಶಿಬಿರ ನಿರ್ವಹಣಾ ಸಮಿತಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಬಿರಾರ್ಥಿ ಲತೇಶ್ ನಿರ್ವಹಿಸಿದರು. ಉಪನ್ಯಾಸಕರಾದ ಸುಭಾಷ್ ಚಂದ್ರ ಜೈನ್ ಸ್ವಾಗತಿಸಿ, ರೋಷನ್ ಧನ್ಯವಾದವಿತ್ತರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya
error: Content is protected !!