26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

ಬೆಳ್ತಂಗಡಿ: ಮಂಗಳೂರಿನ ಹೆಸರಾಂತ ಲೋಟಸ್‌ ಪ್ರಾಪರ್ಟೀಸ್‌ ಬಿಲ್ಡರ್ಸ್‌ ಸಂಸ್ಥೆಯ ಪಾಲುದಾರ, ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್‌ಎಸ್‌ ಯುಐ ಕಾರ್ಯಕರ್ತನಾಗಿರುವ ತನುಷ್‌ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು.

ತನುಷ್‌ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು, ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya
error: Content is protected !!