September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

ಮಂಗಳೂರು: ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ (DM0) ರವರ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಗೆ ಹೊಸದಾಗಿ ನೇಮಕವಾದ ಡಿ.ಎಮ್.ಒ ರವರನ್ನು ಪರಿಚಯ ಮಾಡಿಕೊಳ್ಳಲಾಯಿತು.


ಇತ್ತೀಚಿಗೆ ಉದ್ಘಾಟನೆಗೊಂಡ ಹೊಸ ಸರ್ಜಿಕಲ್ ಬ್ಲಾಕ್ ಗೆ ರೋಗಿಗಳನ್ನು ಹಸ್ತಾಂತರಿಸಿದ ವಿವರವನ್ನು ಪಡೆಯಲಾಯಿತು. ಮುಂದಿನ 175 ನೇ ವರ್ಷದ ಸಂಭ್ರಮಾಚರಣೆಗೆ ಆಸ್ಪತ್ರೆಯ ಕೆಲವು ಮೂಲಭೂತ ಸೌಕರ್ಯಕ್ಕೆ ಸರಕಾರದಿಂದ ಅನುದಾನ ಬಿಡುಗಡೆಯಾಗಲು ಆರೋಗ್ಯ ಸಚಿವರನ್ನು ಭೇಟಿಯಾಗಲು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವಂತೆ ಕೋರಲಾಯಿತು.

ಸಭೆಯಲ್ಲಿ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಪ್ರಮೀಳಾ ಕಾವೂರು, ಅಬ್ದುಲ್ ಸಲೀಮ್ ‘ಅನಿಲ್,ಶಶಿಧರ್, ದಾಮೋದರ ಪುತ್ತೂರು, ಜಯರಾಮ ದಿಡುಪೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!