26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.


ಅವರು ಅ. 10 ರಂದು ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.
ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.


160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಮನೋವಿಜ್ಞಾನ ಸ್ನಾತಕೋತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.


ಪೂರಣ್‌ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!