September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸುವ ಮೂಲಕ ವಿತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಶ್ರೀಮತಿ ಬೇಬಿ ಇವರು ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರಿಂದ ಚೆಕ್ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya
error: Content is protected !!