25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

ಮಂಗಳೂರು: ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ (DM0) ರವರ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಗೆ ಹೊಸದಾಗಿ ನೇಮಕವಾದ ಡಿ.ಎಮ್.ಒ ರವರನ್ನು ಪರಿಚಯ ಮಾಡಿಕೊಳ್ಳಲಾಯಿತು.


ಇತ್ತೀಚಿಗೆ ಉದ್ಘಾಟನೆಗೊಂಡ ಹೊಸ ಸರ್ಜಿಕಲ್ ಬ್ಲಾಕ್ ಗೆ ರೋಗಿಗಳನ್ನು ಹಸ್ತಾಂತರಿಸಿದ ವಿವರವನ್ನು ಪಡೆಯಲಾಯಿತು. ಮುಂದಿನ 175 ನೇ ವರ್ಷದ ಸಂಭ್ರಮಾಚರಣೆಗೆ ಆಸ್ಪತ್ರೆಯ ಕೆಲವು ಮೂಲಭೂತ ಸೌಕರ್ಯಕ್ಕೆ ಸರಕಾರದಿಂದ ಅನುದಾನ ಬಿಡುಗಡೆಯಾಗಲು ಆರೋಗ್ಯ ಸಚಿವರನ್ನು ಭೇಟಿಯಾಗಲು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವಂತೆ ಕೋರಲಾಯಿತು.

ಸಭೆಯಲ್ಲಿ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಪ್ರಮೀಳಾ ಕಾವೂರು, ಅಬ್ದುಲ್ ಸಲೀಮ್ ‘ಅನಿಲ್,ಶಶಿಧರ್, ದಾಮೋದರ ಪುತ್ತೂರು, ಜಯರಾಮ ದಿಡುಪೆ ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya
error: Content is protected !!