23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

ಮಂಗಳೂರು: ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ (DM0) ರವರ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಗೆ ಹೊಸದಾಗಿ ನೇಮಕವಾದ ಡಿ.ಎಮ್.ಒ ರವರನ್ನು ಪರಿಚಯ ಮಾಡಿಕೊಳ್ಳಲಾಯಿತು.


ಇತ್ತೀಚಿಗೆ ಉದ್ಘಾಟನೆಗೊಂಡ ಹೊಸ ಸರ್ಜಿಕಲ್ ಬ್ಲಾಕ್ ಗೆ ರೋಗಿಗಳನ್ನು ಹಸ್ತಾಂತರಿಸಿದ ವಿವರವನ್ನು ಪಡೆಯಲಾಯಿತು. ಮುಂದಿನ 175 ನೇ ವರ್ಷದ ಸಂಭ್ರಮಾಚರಣೆಗೆ ಆಸ್ಪತ್ರೆಯ ಕೆಲವು ಮೂಲಭೂತ ಸೌಕರ್ಯಕ್ಕೆ ಸರಕಾರದಿಂದ ಅನುದಾನ ಬಿಡುಗಡೆಯಾಗಲು ಆರೋಗ್ಯ ಸಚಿವರನ್ನು ಭೇಟಿಯಾಗಲು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವಂತೆ ಕೋರಲಾಯಿತು.

ಸಭೆಯಲ್ಲಿ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶ್ರೀಮತಿ ಪ್ರಮೀಳಾ ಕಾವೂರು, ಅಬ್ದುಲ್ ಸಲೀಮ್ ‘ಅನಿಲ್,ಶಶಿಧರ್, ದಾಮೋದರ ಪುತ್ತೂರು, ಜಯರಾಮ ದಿಡುಪೆ ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!