25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

ಬೆಳ್ತಂಗಡಿ: ಮಡಂತ್ಯಾರು ಪೇಟೆಯ ಮುಖ್ಯ ರಸ್ತೆಯ ಕಲಾ ಸಭಾಂಗಣ ಮುಂಭಾಗದಲ್ಲಿ ಮಿತ್ರಾ ವ್ಹೀಲ್ ಮಾಸ್ಟರ್ ಶಾಪ್ ಅ.10ರಂದು ಶುಭಾರಂಭ ಗೊಂಡಿತು.

ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ್ ರಾವ್ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಮಳಿಗೆಯನ್ನು ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ. ಹರ್ಷ ಸಂಪಿಗೆತ್ತಾಯ ಮತ್ತು ಅರ್ಚಕ ಟಿ. ವಿ. ಶ್ರೀಧರ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಫಾ.ವಂ.ಸ್ಟಾನಿ ಗೋವಿಯಾಸ್ ಮಾತನಾಡಿ ಬೆಳೆಯುತ್ತಿರುವ ಮಡಂತ್ಯಾರು ಪಟ್ಟಣಕ್ಕೆ ಇಂತಹ ಉದ್ಯಮ ಬಹಳ ಮುಖ್ಯ ಈ ಉದ್ಯಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಬೆಟ್ಟು, ಮಾತನಾಡಿ ಬೆಳೆಯುತ್ತಿರುವ ಮಡಂತ್ಯಾರಿಗೆ ಇದು ಹೊಸ ಸೇರ್ಪಡೆ. ಮಿತ್ರ ಸೇಲ್ಸ್ ಇದ್ದದು ಈಗ ಮಿತ್ರ ವೀಲ್ ಮಾಸ್ಟರ್ ಆಗಿ ಬಹಳ ದೊಡ್ಡದಾಗಿ ಈ ಉದ್ಯಮ ಬೆಳೆಯುತ್ತಿದೆ. ಆಟೋಮೊಬೈಲ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಒಂದು ಕ್ಷೇತ್ರ ಎಂದು ಹೇಳಿ ಶುಭ ಹಾರೈಸಿದರು.

ಭಾಜಪಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಿಡಿಓ ನಾಗೇಶ್, ಉದ್ಯಮಿಗಳಾದ ಹೈದರ್ ಎಮ್ ಆರ್. ಸಂಜೀವ ಶೆಟ್ಟಿ ಮುಗೆರೋಡಿ. ಪದ್ಮನಾಭ ಸುವರ್ಣ, ಹಿರಿಯರಾದ ಮುತ್ತಣ್ಣ ಪೂಂಜ ಗರ್ಡಾಡಿ, ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೋಕ್ತೆಸರರಾದ ವಿಠಲ್ ಶೆಟ್ಟಿ ಮೂಡಯೂರು, ಉದ್ಯಮಿ ಯೋಗೀಶ್ ಕಡ್ತಿಲ, ಕಟ್ಟಡ ಮಾಲಕಿ ಅನಿತಾ ಕೊರೆಯ, ಪ್ರಮುಖರಾದ ಸದಾನಂದ ಪೂಜಾರಿ, ಮಾಲಕಿ ಶೋಭಾ ಗಂಗಾಧರ ಮಿತ್ರ, ಹೇಮಂತ್ ಶೆಟ್ಟಿ, ವರುಣ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya
error: Content is protected !!