26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

ಬೆಳ್ತಂಗಡಿ: ಮಂಗಳೂರಿನ ಹೆಸರಾಂತ ಲೋಟಸ್‌ ಪ್ರಾಪರ್ಟೀಸ್‌ ಬಿಲ್ಡರ್ಸ್‌ ಸಂಸ್ಥೆಯ ಪಾಲುದಾರ, ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್‌ಎಸ್‌ ಯುಐ ಕಾರ್ಯಕರ್ತನಾಗಿರುವ ತನುಷ್‌ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು.

ತನುಷ್‌ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು, ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!