May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

ಬೆಳ್ತಂಗಡಿ: ಮಂಗಳೂರಿನ ಹೆಸರಾಂತ ಲೋಟಸ್‌ ಪ್ರಾಪರ್ಟೀಸ್‌ ಬಿಲ್ಡರ್ಸ್‌ ಸಂಸ್ಥೆಯ ಪಾಲುದಾರ, ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್‌ಎಸ್‌ ಯುಐ ಕಾರ್ಯಕರ್ತನಾಗಿರುವ ತನುಷ್‌ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು.

ತನುಷ್‌ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು, ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!