26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.


ಅವರು ಅ. 10 ರಂದು ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.
ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.


160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಮನೋವಿಜ್ಞಾನ ಸ್ನಾತಕೋತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.


ಪೂರಣ್‌ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya
error: Content is protected !!