27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.


ಅವರು ಅ. 10 ರಂದು ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.
ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.


160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಮನೋವಿಜ್ಞಾನ ಸ್ನಾತಕೋತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.


ಪೂರಣ್‌ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.

Related posts

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya
error: Content is protected !!