25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಡಾ.ಸವನ್ ರೈ ಬಾರ್ದಡ್ಕ ಬಳಂಜ ಅವರ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಂಡಿತು.

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ನೂತನ‌ ಡೆಂಟಲ್ ಕ್ಲಿನಿಕ್ ನ್ನು ಉದ್ಘಾಟಿಸಿ ಶುಭಕೋರಿದರು.

ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ,ಸಹಕಾರ ರತ್ನ ದಂಬೆಕಾನ ಸದಾಶಿವ ರೈ ದೀಪ ಪ್ರಜ್ವಲಿಸಿ ಶುಭಕೋರಿದರು‌.

ಈ ಸಂದರ್ಭದಲ್ಲಿ ವಾಣಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಅಳದಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಹರೀಶ್ ರೈ ಬಾರ್ದಡ್ಕ, ನಿವೃತ ಬ್ಯಾಂಕ್ ಉದ್ಯೋಗಿ ನಾರಾಯಣ್ ರೈ, ಬಳಂಜ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್, ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ತಿಮ್ಮಪ್ಪ ಪೂಜಾರಿ ತಾರಿಪಡ್ಪು, ವಸಂತ ಮಜಲು, ರಮಾನಾಥ ಶೆಟ್ಟಿ ಪಂಬಾಜೆ, ಎಜೆ ಆಸ್ಪತ್ರೆಯ ಡಾ.ಸೌರಾಬ್, ಹೆಚ್.ಪಿ ಕಂಪೆನಿ ಉದ್ಯೋಗಿ ತುಷಾರ್ ರೈ ಬೆಂಗಳೂರು, ದೇರಳಕಟ್ಟೆ ಆಸ್ಪತ್ರೆಯ ಸಾತ್ವಿಕ್ ರೈ, ಯೋಗೀಶ್ ಕುಮಾರ್ ನಡಕ್ಕರ, ನಾಗೇಶ್ ಕೋಟ್ಯಾನ್ ನಿಸರ್ಗ ಗುರುವಾಯನಕೆರೆ, ಕೃಷಿಕರಾದ ರಾಧಾಕೃಷ್ಣ ರೈ, ಪುಷ್ಪರಾಜ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ ಹಂಕರ್ಜಾಲು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ದೇಜಪ್ಪ ಪೂಜಾರಿ ಬಳಂಜ ,ಲೋಲಾಕ್ಷ ಶೆಟ್ಟಿ, ಹರೀಶ್ ವೈ ಚಂದ್ರಮ, ವೈಭವ್ ಸಂತೋಷ್ ಶೆಟ್ಟಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಊರವರು,ಬಂಧು ಮಿತ್ರರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಶ್ರೀಮತಿ ಸುಖ ಸತೀಶ್ ರೈ,ಡಾ. ಸವನ್ ರೈ,ಸಂಹಿತ ರೈ ಬಾರ್ದಡ್ಕ ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya
error: Content is protected !!