ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Leave a Comment

error: Content is protected !!