September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

ಉಜಿರೆ: ಶಿಕ್ಷಣದ ಜೊತೆ ಸಂಸ್ಕಾರ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವೈಶಿಷ್ಟ್ಯ, ಹಾಗಾಗಿ ಕಾಲೇಜು ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಆಗ ಮಾತ್ರ ನಿಮ್ಮನ್ನು ನೀವು ಹೆಚ್ಚು ತಿಳಿದುಕೊಳ್ಳಬಹುದು” ಎಂದು ಉಜಿರೆಯ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಪಡುಮಲೆ ಹೇಳಿದರು.

ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಅ. 10 ರಂದು ಆಯೋಜಿಸಿದ್ದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್ ಉದ್ಘಾಟಿಸಿ ಮಾತನಾಡಿದ ಅವರು, ಕ್ರೆಸಿಟಾದಂತಹ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ವ್ಯಕ್ತಿತ್ವ ಬೆಳವಣಿಗೆ ಜೊತೆಗೆ, ತರಗತಿಯಲ್ಲಿ ಓದಿ ಕಲಿಯುವುದಕ್ಕಿಂತ ಹೆಚ್ಚಿನ ವಿಷಯಗಳನ್ನು ಕಲಿಯಲು ಮುಕ್ತ ಅವಕಾಶ ದೊರಕುತ್ತದೆ ಎಂದರು.


ವಿದ್ಯಾರ್ಥಿಗಳು ಮೌಲ್ಯಯುತ ಗುಣಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ, ತಂದೆ, ತಾಯಿ ಮತ್ತು ಗುರುಗಳ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು. ಅವರನ್ನು ಗೌರವಿಸಬೇಕು. ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಇತರರಿಗೆ ಸ್ಫೂರ್ತಿದಾಯಕವಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, “ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳುವುದು ಅತ್ಯಗತ್ಯ. ಗುರಿ ಸಾಧಿಸುವುದು ಸುಲಭದ ಮಾತಲ್ಲ. ಅದಕ್ಕಾಗಿ ನಾವು ಕೆಲವೊಂದು ವಿಶೇಷ ಅರ್ಹತೆ ಮತ್ತು ಗುಣಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ” ಎಂದರು. ಕ್ರೆಸಿಟಾದಂತಹ ಫೆಸ್ಟ್ ವಿದ್ಯಾರ್ಥಿಗಳಿಗೆ ತಮ್ಮ ಶಕ್ತಿ, ದೌರ್ಬಲ್ಯ ಹಾಗೂ ಹಲವಾರು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಉತ್ತಮ ಅವಕಾಶ ಒದಗಿಸುತ್ತದೆ. ನಮ್ಮಲ್ಲಿನ ಕೊರತೆಗಳನ್ನು ಬಲವಾಗಿ ಪರಿವರ್ತಿಸಿಕೊಂಡಾಗ ನಮ್ಮ ವೈಯಕ್ತಿಕ ಬೆಳವಣಿಗೆ ಕೂಡ ಸಾಧ್ಯ” ಎಂದು ಅವರು ತಿಳಿಸಿದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಕುಮಾರಿ ಕೆ.ಪಿ., ಕಾರ್ಯಕ್ರಮದ ವಿದ್ಯಾರ್ಥಿ ಪ್ರತಿನಿಧಿ ಜಿ.ವಿ. ಚಂದನ, ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಚಂದ್ರಿಕಾ ಸ್ವಾಗತಿಸಿದರು. ವೈದೇಹಿ ಮತ್ತು ಪೂರ್ವಿ ಪ್ರಾರ್ಥಿಸಿದರು. ಚಂದನ ವಂದಿಸಿದರು. ಸಿಂಧು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!