23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಅ.11 ರಂದು ತಡರಾತ್ರಿ 11.30ರ ಸಮಯ ದುರ್ಘಟನೆ ಸಂಭವಿಸಿದೆ.


ಬಸ್‌ನ ಡ್ರೈವರ್‌ ಬಸ್‌ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಮೈಸೂರು ಮೂಲದ ಭರತ್(28) ಎಂದು ಗುರುತಿಸಲಾಗಿದೆ.


ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಸ್ ನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು ಸಹ ಚಾಲಕ ಅವಿನಾಶ್ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಲಿಲ್ಲ.
ಮೃತ ದೇಹವನ್ನು ಪುತ್ತೂರಿನ ಸರಕಾರಿ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya
error: Content is protected !!