26.7 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.3 ರಿಂದ ಅ.11 ರವರೆಗೆ ಧರ್ಮದರ್ಶಿ ಯೋಗೀಶ್ ಪೂಜಾರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು.

ದೇವಸ್ಥಾನದ ಪ್ರಧಾನ ಅರ್ಚಕ ಯಶಂವಂತ ಶಾಂತಿ ಹಾಗೂ ಲಕ್ಷ್ಮಣ ಶಾಂತಿಯವರು ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಅ.3 ರಿಂದ ಅ.11 ರವರೆಗೆ ಪ್ರತಿದಿನ ಸಾಯಂಕಾಲ ಗಂಟೆ 7ಕ್ಕೆ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಅ.9 ಬುಧವಾರ ಮೂಲ ನಕ್ಷತ್ರದಂದು ಬೆಳಿಗ್ಗೆ 6.3೦ರಿಂದ ಸ್ವಸ್ತಿ ಪುಣ್ಯಾಹ, ಗಣಹೋಮ, ಪಂಚಾಮೃತಾಭಿಷೇಕ, ನವಕ ಕಲಾಶಾಭಿಷೇಕ. ಗಂಟೆ 9ಕ್ಕೆ ದುರ್ಗಾ ಹೋಮ, ಮಧ್ಯಾಹ್ನ

ಗಂಟೆ 12ಕ್ಕೆ ಗುರುಪೂಜೆ, 12ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಧ್ಯಾಹ್ನ ಗಂಟೆ 1ಕ್ಕೆ ಅನ್ನಸಂತರ್ಪಣೆ. ಸಂಜೆ ಗಂಟೆ 6ಕ್ಕೆ ಶ್ರೀ ಭಗವತಿ ಭಜನಾ ಮಂಡಳಿ ಇವರಿಂದ ಭಜನಾ ಸೇವಾ ಕಾರ್ಯಕ್ರಮ ಸಂಜೆ ಗಂಟೆ 6.3೦ಕ್ಕೆ ಶ್ರೀಚಕ್ರ ಪೂಜೆ, ರಾತ್ರಿ ೮.೩೦ಕ್ಕೆ ಶ್ರೀ ದೇವಿ ಭಗವತಿ ಅಮ್ಮನವರಿಗೆ ರಂಗಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಅಂಕಾಜೆ ಮತ್ತು ಸರ್ವ ಸದಸ್ಯರು, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾಗೂ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮತ್ತು ಪದಾಧಿಕಾರಿಗಳು, ಮೇಲಂತಬೆಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಊರ ಹಾಗೂ ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

25 ಕಾಜೂರು ಮಖಾಂ ಉರೂಸ್ ಸಮಾರೋಪ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

Suddi Udaya
error: Content is protected !!