30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.3 ರಿಂದ ಅ.11 ರವರೆಗೆ ಧರ್ಮದರ್ಶಿ ಯೋಗೀಶ್ ಪೂಜಾರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು.

ದೇವಸ್ಥಾನದ ಪ್ರಧಾನ ಅರ್ಚಕ ಯಶಂವಂತ ಶಾಂತಿ ಹಾಗೂ ಲಕ್ಷ್ಮಣ ಶಾಂತಿಯವರು ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಅ.3 ರಿಂದ ಅ.11 ರವರೆಗೆ ಪ್ರತಿದಿನ ಸಾಯಂಕಾಲ ಗಂಟೆ 7ಕ್ಕೆ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಅ.9 ಬುಧವಾರ ಮೂಲ ನಕ್ಷತ್ರದಂದು ಬೆಳಿಗ್ಗೆ 6.3೦ರಿಂದ ಸ್ವಸ್ತಿ ಪುಣ್ಯಾಹ, ಗಣಹೋಮ, ಪಂಚಾಮೃತಾಭಿಷೇಕ, ನವಕ ಕಲಾಶಾಭಿಷೇಕ. ಗಂಟೆ 9ಕ್ಕೆ ದುರ್ಗಾ ಹೋಮ, ಮಧ್ಯಾಹ್ನ

ಗಂಟೆ 12ಕ್ಕೆ ಗುರುಪೂಜೆ, 12ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮಗಳು ಜರುಗಿತು. ಮಧ್ಯಾಹ್ನ ಗಂಟೆ 1ಕ್ಕೆ ಅನ್ನಸಂತರ್ಪಣೆ. ಸಂಜೆ ಗಂಟೆ 6ಕ್ಕೆ ಶ್ರೀ ಭಗವತಿ ಭಜನಾ ಮಂಡಳಿ ಇವರಿಂದ ಭಜನಾ ಸೇವಾ ಕಾರ್ಯಕ್ರಮ ಸಂಜೆ ಗಂಟೆ 6.3೦ಕ್ಕೆ ಶ್ರೀಚಕ್ರ ಪೂಜೆ, ರಾತ್ರಿ ೮.೩೦ಕ್ಕೆ ಶ್ರೀ ದೇವಿ ಭಗವತಿ ಅಮ್ಮನವರಿಗೆ ರಂಗಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಅಂಕಾಜೆ ಮತ್ತು ಸರ್ವ ಸದಸ್ಯರು, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾಗೂ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮತ್ತು ಪದಾಧಿಕಾರಿಗಳು, ಮೇಲಂತಬೆಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಊರ ಹಾಗೂ ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!