25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

ತೋಟತ್ತಾಡಿ ಅ:9
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್ ಡಿಪಿ) ಶಾಖೆ ತೋಟತ್ತಾಡಿಯಲ್ಲಿ ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿಯಲ್ಲಿ ಶ್ರೀ ಶಾರದಾ ದೇವಿಯ ಆರಾಧನೆ ಬಹಳ ವಿಶೇಷವಾದದ್ದು, ಮತ್ತು ಶ್ರೀ ಶಾರದಾ ದೇವಿಯ ಆರಾಧನೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ, ವಿದೂಷಿ ಪ್ರೀಯ ಸತೀಶ್, ಶ್ರೀಮತಿ ಜಯಂತಿ ಚಿದಾನಂದ ಹೊಸಮನೆ,ಎಸ್ ಎನ್ ಡಿ ಪಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಿಂಧು, ಸದಸ್ಯರಾದ ಶ್ರೀಮತಿ ಮಲ್ಲಿಕಾ,ನೇರಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜೀತಾ, ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಅಧ್ಯಕ್ಷರಾದ ಪ್ರಸಾದ್ ಎಂ, ಕಾರ್ಯದರ್ಶಿ ಗಣೇಶ್ ಮೊದಲಾದವರಿದ್ದರು, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಂತರ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆದು ಬೆಂದ್ರಾಳ ನದಿಯಲ್ಲಿ ಜಲಸ್ತಂಭನ ನಡೆಯಿತು.

Related posts

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!