July 29, 2026
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.
ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು. ವಿಶೇಷವಾಗಿ ನೂತನವಾಗಿ ರಚನೆಗೊಂಡ ಜೈ ಶ್ರೀ ರಾಮ್ ಮಹಿಳಾ ಸಂಘವನ್ನು ಸಸಿ ನೆಡುವುದರ ಮೂಲಕ ನೂತನ ಸಮಿತಿಗೆ ಚಾಲನೆ ನೀಡಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ತೀರ್ಥಕಲಾ ಮುಂಡಾಜೆ ಉಪಾಧ್ಯಕ್ಷರಾದ ಶಶಿಪ್ರಭ ಕೊಂಬೇಡಿ,ಮಮತಾ ಕೆಲೆಂಜಿಮಾರು,ಕಾರ್ಯದರ್ಶಿಯಾದ ಭವ್ಯ ಗಣೇಶ ಕೇದಗೆದಕೋಡಿ , ಜೊತೆಗೆ ಕಾರ್ಯದರ್ಶಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿ ಸವಿತಾ ಪದ್ಮುಂಜ, ಭವ್ಯ ಪರಕ್ಕಾಜೆ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!