25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya
error: Content is protected !!