24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

ತೋಟತ್ತಾಡಿ ಅ:9
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್ ಡಿಪಿ) ಶಾಖೆ ತೋಟತ್ತಾಡಿಯಲ್ಲಿ ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿಯಲ್ಲಿ ಶ್ರೀ ಶಾರದಾ ದೇವಿಯ ಆರಾಧನೆ ಬಹಳ ವಿಶೇಷವಾದದ್ದು, ಮತ್ತು ಶ್ರೀ ಶಾರದಾ ದೇವಿಯ ಆರಾಧನೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ, ವಿದೂಷಿ ಪ್ರೀಯ ಸತೀಶ್, ಶ್ರೀಮತಿ ಜಯಂತಿ ಚಿದಾನಂದ ಹೊಸಮನೆ,ಎಸ್ ಎನ್ ಡಿ ಪಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಿಂಧು, ಸದಸ್ಯರಾದ ಶ್ರೀಮತಿ ಮಲ್ಲಿಕಾ,ನೇರಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜೀತಾ, ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಅಧ್ಯಕ್ಷರಾದ ಪ್ರಸಾದ್ ಎಂ, ಕಾರ್ಯದರ್ಶಿ ಗಣೇಶ್ ಮೊದಲಾದವರಿದ್ದರು, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಂತರ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆದು ಬೆಂದ್ರಾಳ ನದಿಯಲ್ಲಿ ಜಲಸ್ತಂಭನ ನಡೆಯಿತು.

Related posts

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
error: Content is protected !!