July 23, 2026
Uncategorized

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ನಡ :ವಿದ್ಯಾರ್ಥಿಗಳು ಶಾಲಾ ಶಿಕ್ಷಣದೊಂದಿಗೆ ಜೀವನ ಶಿಕ್ಷಣವನ್ನು ಪಡೆದಾಗ ಯಶಸ್ಸನ್ನು ಗಳಿಸಬಹುದು ಎಂದು ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಎಸ್ ಹೇಳಿದರು.
ಅವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ I ಇಲ್ಲಿ ನಡೆಯಲಿರುವ ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಪುಸ್ತಕದಿಂದ ಪರಿಸರಕ್ಕೆ, ಪೆನ್ನಿನಿಂದ ಪಿಕ್ಕಾಸಿನೆಡೆಗೆ, ಕಾಲೇಜಿನಿಂದ ಗ್ರಾಮೀಣ ಪ್ರದೇಶಕ್ಕೆ ಬಂದಾಗ ನಿಜವಾದ ಜ್ಞಾನವನ್ನು ಗಳಿಸಿಕೊಳ್ಳಲು ಸಾಧ್ಯವಿದೆ. ತಮ್ಮಲ್ಲಿರುವ ಋಣಾತ್ಮಕ ವಿಚಾರಗಳನ್ನು ಕಳೆದು ಗುಣಾತ್ಮಕ ವಿಚಾರಗಳನ್ನು ಬೆಳೆಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿಯಾಗಲಿದೆ ಎಂದರು.
ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಕನ್ಯಾಡಿ I ಶಾಲೆಯ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೋಣಯ್ಯ ಗೌಡ, ಬಂಗಾಡಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಬೆಳ್ತಂಗಡಿ ಸಿ. ಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್, ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ ಕಡ್ತಿಯಾರ್, ಕೃಷಿಕರಾದ ಪವನ್ ಶೆಟ್ಟಿ ಉಪಸ್ಥಿರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಧನ್ಯವಾದವಿತ್ತರು. ಎನ್ಎಸ್ಎಸ್ ನ ಸಹ ಕಾರ್ಯಕ್ರಮ ಅಧಿಕಾರಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya
error: Content is protected !!