July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya
error: Content is protected !!