25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.
ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು. ವಿಶೇಷವಾಗಿ ನೂತನವಾಗಿ ರಚನೆಗೊಂಡ ಜೈ ಶ್ರೀ ರಾಮ್ ಮಹಿಳಾ ಸಂಘವನ್ನು ಸಸಿ ನೆಡುವುದರ ಮೂಲಕ ನೂತನ ಸಮಿತಿಗೆ ಚಾಲನೆ ನೀಡಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ತೀರ್ಥಕಲಾ ಮುಂಡಾಜೆ ಉಪಾಧ್ಯಕ್ಷರಾದ ಶಶಿಪ್ರಭ ಕೊಂಬೇಡಿ,ಮಮತಾ ಕೆಲೆಂಜಿಮಾರು,ಕಾರ್ಯದರ್ಶಿಯಾದ ಭವ್ಯ ಗಣೇಶ ಕೇದಗೆದಕೋಡಿ , ಜೊತೆಗೆ ಕಾರ್ಯದರ್ಶಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿ ಸವಿತಾ ಪದ್ಮುಂಜ, ಭವ್ಯ ಪರಕ್ಕಾಜೆ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya
error: Content is protected !!