July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!