25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya
error: Content is protected !!