September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು.

ಅತಿಥಿಗಳಾಗಿ ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿಯವರು, ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಟ್ರಸ್ಟೀ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು, ಆಶ್ರಮನಿವಾಸಿಗಳಾದ ರವಿ ಮತ್ತು ಸರಸ್ವತಿಪ್ರಿಯರವರು ಉಪಸ್ಥಿತರಿದ್ದರು..


ಸಭಾಕಾರ್ಯಕ್ರಮದ ನಂತರ ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿವರ್ಗದವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya
error: Content is protected !!