23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

ಬೆಳ್ತಂಗಡಿ: ಇತ್ತೀಚೆಗಷ್ಟೇ ನಮ್ಮನೆಲ್ಲ ಅಗಲಿರುವ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪೂರ್ವ ಅಧ್ಯಕ್ಷರಾದ ಪೃಥ್ವಿ ರಂಜನ್ ರಾವ್ ರವರಿಗೆ ಗೌರವ ಪೂರ್ವಕ ನುಡಿ ನಮನವನ್ನು ಜೆಸಿ ಭವನದಲ್ಲಿ ಸಲ್ಲಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಹಾಗೂ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡುವ ಮೂಲಕ ಘಟಕದ ಪರವಾಗಿ ಗೌರವವನ್ನು ಸಲ್ಲಿಸಲಾಯಿತು.

1983ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಂತರ ಎಲ್ಲಾ ಅಧ್ಯಕ್ಷರುಗಳಿಗೆ ಮಾರ್ಗದರ್ಶನವನ್ನು ಮಾಡುತ್ತಾ ಜೆಸಿ ಸಂಸ್ಥೆಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಂತರ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕವಾಗಿ ಸೇವೆಯನ್ನು ಸಲ್ಲಿಸುತ್ತಾ ಬಂದಿರುತಾರೆ.

ಇವರ ಪತ್ನಿ ಉಮಾ ರಾವ್ ರವರು ಕೂಡ ಜೆಸಿರೇಟ್ ವಿಭಾಗದ ಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ ಪುತ್ರ ರತೀಶ್ ಹಾಗೂ ಸೊಸೆ ಪ್ರೀತಿ ರತೀಶ್ ಕೂಡ ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸಕ್ರಿಯ ಸದಸ್ಯರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ರವರು ವಹಿಸಿದ್ದರು.

ಘಟಕದ ಪೂರ್ವ ಅಧ್ಯಕ್ಷರಾದ ಚಿದಾನಂದ ಇಡ್ಯಾ ರವರು ಪೃಥ್ವಿರಂಜನ್ ರಾವ್ ರವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಬಗ್ಗೆ ಹಾಗೂ ಅವರ ಕೊಡುಗೆಗಳನ್ನು ಸ್ಮರಿಸುತ್ತಾ ನುಡಿ ನಮನವನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕುರು ಭಾರ್ಗವ ಘಟಕದ ಪೂರ್ವ ಅಧ್ಯಕ್ಷರು ಹಾಗೂ ವಲಯ ಹದಿನೈದರ ಲೇಡಿ ಜೆಸಿ ವಿಭಾಗದ ಸಂಯೋಜಕರಾದ ಮಾಲತಿ ಉಮೇಶ್ ಹಾಗೂ ಜೆಸಿಐ ಮುಂಡ್ಕುರ್ ಭಾರ್ಗವ ಘಟಕದ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿಗಳಾದ ವರುಣ್ ಪ್ರಭು ಪ್ರಭು, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಪ್ರಶಾಂತ್ ಲಾಯಿಲ, ನಾರಾಯಣ ಶೆಟ್ಟಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಅಕ್ಷಯ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ರವರ ಧನ್ಯವಾದವಿತ್ತರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya
error: Content is protected !!