25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!