22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!