September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರಾದ ಮಹಮ್ಮದ್ ಹನೀಫ್ ಹಾಗೂ ಶ್ರೀಮತಿ ಮುಮ್ತಾಜ್ ಬೇಗಂ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬಂಟ್ವಾಳದ ವಕೀಲರಾದ ಇಮ್ತಿಯಾಜ್ ಬಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.


ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದವನ್ನು ವಕೀಲರಾದ ನವಾಜ್ ಶರೀಫ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕವಾಳಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

ಈ ಕಾರ್ಯಕ್ರಮದಲ್ಲಿ ವಕೀಲರಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!