July 23, 2026
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಇವರನ್ನು ಇಂದು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ‌ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತಿದ್ದಾರೆ.

Related posts

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya
error: Content is protected !!