September 6, 2026
ಧಾರ್ಮಿಕ

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕದ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ಸನ್ನಿಧಿಯಲ್ಲಿ ನೂತನ ದೇಗುಲಕ್ಕೆ ಸೋಮವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ನೆಕ್ಕರಡ್ಕದಲ್ಲಿ ನೆಲೆಸಿರುವ ಗೋಖಲೆ- ಹೆಬ್ಬಾರ್ ವಂಶಸ್ಥರು ಸುಮಾರು 300 ವರ್ಷಗಳ ಹಿಂದೆ ಈ ದೇವಸ್ಥಾನವನ್ನು ಸ್ಥಾಪಿಸಿ, ಇಂದಿನವರೆಗೂ ಆ ವಂಶಸ್ಥರು ಪೂಜಾ ಕೈಂಕರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ದೇವಸ್ಥಾನವು ಜೀರ್ಣಾವಸ್ಥೆಗೆ ತಲುಪಿದ್ದು ಜೀರ್ಣೋದ್ಧಾರ ಕಾರ್ಯಗಳು ಪ್ರಾರಂಭಗೊಂಡಿವೆ. ಜೀರ್ಣೋದ್ಧಾರದ ಮೊದಲ ಹಂತವಾಗಿ ಇಂದು ವೇದಮೂರ್ತಿ ಸತ್ಯ ಭಟ್ ಬಜಗೋಳಿ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಕೇಳ್ಕರ್, ನಿವೃತ್ತ ಶಿಕ್ಷಕ ಗೋವಿಂದ ದಾಮಲೆ, ಉಜಿರೆ ಸಂಪೂರ್ಣ ಟೆಕ್ಸ್ ಟೈಲ್ಸ್ ಮಾಲೀಕ ಅನಿಲ್ ಕುಮಾರ್, ಕಳೆಂಜ ಶ್ರೀಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಕಾಯಡ ಶ್ರೀಧರ ರಾವ್, ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಸ್ಥಳೀಯ ಮುಖಂಡರಾದ ಅಡ್ಕಾಡಿ ಧರ್ಮರಾಜ ಗೌಡ, ತಾ.ಪಂ. ಮಾಜಿ ಸದಸ್ಯ ವಾಮನ ತಾಮ್ಹನ್ಕರ್, ಗೋಖಲೆ-ಹೆಬ್ಬಾರ್ ಕುಟುಂಬಸ್ಥರು, ಗ್ರಾಮಸ್ಥರು, ಊರ ಪರವೂರ ಮಹನೀಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya
error: Content is protected !!