23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!