26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!