30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
error: Content is protected !!