July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!