23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya
error: Content is protected !!