23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!