September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯಿತು.

ಸೈಬರ್ ಅಪರಾಧಗಳು ಹೆಚ್ಚು ನಡೆದಿದ್ದು ಇವರ ಪೈಕಿ ಒಬ್ಬ ಗ್ರಾಹಕರಿಗೆ ಮಾತ್ರ ಹಣ ಹಿಂತಿರುಗಿ ಬಂದಿದ್ದು ಈ ಬಗ್ಗೆ ವರದಿ ಕೇಳಿದರು ಬ್ಯಾಂಕಿನ ಸಿಬ್ಬಂದಿಗಳು ಯಾವುದೇ ರೀತಿಯ ಮಾಹಿತಿ ನೀಡಲು ನಿರಾಕರಿಸುತ್ತಿರುವುದರಿಂದ ಗ್ರಾಹಕರಿಗೆ ಸಂಶಯ ಕಾಡುತ್ತಿದೆ ಅಲ್ಲದೆ ಅತಿ ದೊಡ್ಡಮಟ್ಟದಲ್ಲಿ ಗ್ರಾಹಕರ ಖಾತೆಯಿಂದ ಸೈಬರ್ ಅಪರಾಧದ ಮೂಲಕ ಹಣ ವರ್ಗಾವಣೆ ಆಗುತ್ತಿರುವುದರಿಂದ ಬ್ಯಾಂಕಿನ ಗ್ರಾಹಕರೆಲ್ಲರೂ ಅಂತಕಕ್ಕೆ ಒಳಗಾಗಿದ್ದಾರೆ.

ಇಲ್ಲಿನ ಹೆಚ್ಚಿನ ಸಿಬ್ಬಂದಿಗಳಿಗೆ ವ್ಯವಹರಿಸಲು ಭಾಷೆ ಸಮಸ್ಯೆ ಆಗುತ್ತಿರುವುದರಿಂದ ಗ್ರಾಹಕರಿಗೆ ಬ್ಯಾಂಕಿನೊಂದಿಗೆ ವ್ಯವಹಾರ ನಡೆಸಲು, ತಮಗಾದ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ

ಕಳೆದ 19ವರ್ಷಗಳಿಂದ ಬ್ಯಾಂಕಿನ ಸರಾಫರಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯ ಅವರನ್ನು ಸಕಾರಣವಿಲ್ಲದೆ ಆರೋಪಿಯನ್ನಾಗಿ ಬಿಂಬಿಸಿ ಕೆಲಸದಿಂದ ವಜಾ ಮಾಡಲಾಗಿದೆ, ಈ ಬಗ್ಗೆ ಸರಿಯಾದ ಕಾರಣ ನೀಡುವಂತೆ ಒತ್ತಾಯಿಸಲಾಯಿತು.ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಸಂಘಟಕರು ತಿಳಿಸಿದರು.

ಹೋರಾಟದಲ್ಲಿ ನ್ಯಾಯವಾದಿ ಬಿ.ಎಂ ಭಟ್, ಸಾಮಾಜಿಕ ಹೋರಾಟಗಾರರಾದ ಈಶ್ವರಿ, ಧನಂಜಯ, ಶೀನ ನಾಯ್ಕ್, ತುಕ್ರಪ್ಪ ಶೆಟ್ಟಿ, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಇಸ್ಮಾಯಿಲ್, ಸಮಾಜ ಸೇವಕ ಶಾಮರಾಜ್, ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಡಾ.ಗಣೇಶ್ ಪ್ರಸಾದ್, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಸದಸ್ಯ ಪ್ರಶಾಂತ.ರೈ, ಜೇಸುದಾಸ್, ನಾರಾಯಣಗೌಡ, ಸತ್ಯದಾಸ್, ಶ್ರೀಧರ ಗೌಡ, ಆನಂದ.ರೈ, ಶಾಂತಪ್ಪ ಮಡಿವಾಳ, ಬ್ಯಾಂಕಿನ ಸರಾಫ ಪದ್ಮನಾಭ ಆಚಾರ್ಯ ದಂಪತಿಗಳು ಮುಂತಾದವರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!