23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯಿತು.

ಸೈಬರ್ ಅಪರಾಧಗಳು ಹೆಚ್ಚು ನಡೆದಿದ್ದು ಇವರ ಪೈಕಿ ಒಬ್ಬ ಗ್ರಾಹಕರಿಗೆ ಮಾತ್ರ ಹಣ ಹಿಂತಿರುಗಿ ಬಂದಿದ್ದು ಈ ಬಗ್ಗೆ ವರದಿ ಕೇಳಿದರು ಬ್ಯಾಂಕಿನ ಸಿಬ್ಬಂದಿಗಳು ಯಾವುದೇ ರೀತಿಯ ಮಾಹಿತಿ ನೀಡಲು ನಿರಾಕರಿಸುತ್ತಿರುವುದರಿಂದ ಗ್ರಾಹಕರಿಗೆ ಸಂಶಯ ಕಾಡುತ್ತಿದೆ ಅಲ್ಲದೆ ಅತಿ ದೊಡ್ಡಮಟ್ಟದಲ್ಲಿ ಗ್ರಾಹಕರ ಖಾತೆಯಿಂದ ಸೈಬರ್ ಅಪರಾಧದ ಮೂಲಕ ಹಣ ವರ್ಗಾವಣೆ ಆಗುತ್ತಿರುವುದರಿಂದ ಬ್ಯಾಂಕಿನ ಗ್ರಾಹಕರೆಲ್ಲರೂ ಅಂತಕಕ್ಕೆ ಒಳಗಾಗಿದ್ದಾರೆ.

ಇಲ್ಲಿನ ಹೆಚ್ಚಿನ ಸಿಬ್ಬಂದಿಗಳಿಗೆ ವ್ಯವಹರಿಸಲು ಭಾಷೆ ಸಮಸ್ಯೆ ಆಗುತ್ತಿರುವುದರಿಂದ ಗ್ರಾಹಕರಿಗೆ ಬ್ಯಾಂಕಿನೊಂದಿಗೆ ವ್ಯವಹಾರ ನಡೆಸಲು, ತಮಗಾದ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ

ಕಳೆದ 19ವರ್ಷಗಳಿಂದ ಬ್ಯಾಂಕಿನ ಸರಾಫರಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯ ಅವರನ್ನು ಸಕಾರಣವಿಲ್ಲದೆ ಆರೋಪಿಯನ್ನಾಗಿ ಬಿಂಬಿಸಿ ಕೆಲಸದಿಂದ ವಜಾ ಮಾಡಲಾಗಿದೆ, ಈ ಬಗ್ಗೆ ಸರಿಯಾದ ಕಾರಣ ನೀಡುವಂತೆ ಒತ್ತಾಯಿಸಲಾಯಿತು.ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಸಂಘಟಕರು ತಿಳಿಸಿದರು.

ಹೋರಾಟದಲ್ಲಿ ನ್ಯಾಯವಾದಿ ಬಿ.ಎಂ ಭಟ್, ಸಾಮಾಜಿಕ ಹೋರಾಟಗಾರರಾದ ಈಶ್ವರಿ, ಧನಂಜಯ, ಶೀನ ನಾಯ್ಕ್, ತುಕ್ರಪ್ಪ ಶೆಟ್ಟಿ, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಇಸ್ಮಾಯಿಲ್, ಸಮಾಜ ಸೇವಕ ಶಾಮರಾಜ್, ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಡಾ.ಗಣೇಶ್ ಪ್ರಸಾದ್, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಸದಸ್ಯ ಪ್ರಶಾಂತ.ರೈ, ಜೇಸುದಾಸ್, ನಾರಾಯಣಗೌಡ, ಸತ್ಯದಾಸ್, ಶ್ರೀಧರ ಗೌಡ, ಆನಂದ.ರೈ, ಶಾಂತಪ್ಪ ಮಡಿವಾಳ, ಬ್ಯಾಂಕಿನ ಸರಾಫ ಪದ್ಮನಾಭ ಆಚಾರ್ಯ ದಂಪತಿಗಳು ಮುಂತಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!