ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು.

ಅತಿಥಿಗಳಾಗಿ ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿಯವರು, ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಟ್ರಸ್ಟೀ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು, ಆಶ್ರಮನಿವಾಸಿಗಳಾದ ರವಿ ಮತ್ತು ಸರಸ್ವತಿಪ್ರಿಯರವರು ಉಪಸ್ಥಿತರಿದ್ದರು..


ಸಭಾಕಾರ್ಯಕ್ರಮದ ನಂತರ ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿವರ್ಗದವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!