27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!