September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya
error: Content is protected !!