23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya
error: Content is protected !!