July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya
error: Content is protected !!