July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನವೆಂಬರ್ 10 ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಆನಂದ ಗೌಡ ರವರು ಮಾತಾನಾಡುತ್ತ ಇಂದು ಜಗತ್ತಿನಲ್ಲಿ 157 ಕ್ರೈಸ್ತ, 52 ಮುಸ್ಲಿಂ, 13 ಬೌದ್ಧ ಮತ್ತು 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಜಾತ್ಯತೀತ ಭಾರತದ 9 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಜಾತ್ಯತೀತ ಸರಕಾರವು ದೇವಾಲಯಗಳನ್ನು ಸ್ವಾಧೀನ ಪಡಿಸಿಕೊಳ್ಳುತ್ತವೆ ಮತ್ತು ಹಿಂದೂಗಳ ತೀರ್ಥಯಾತ್ರೆಗಳ ಮೇಲೆ ತೆರಿಗೆಯನ್ನು ಹೇರುತ್ತದೆ. ಮತಾಂತರ, ಲವ್ ಜಿಹಾದ್, ಉಗುಳು ಜಿಹಾದ್ ಮುಂತಾದ ಷಡ್ಯಂತ್ರಗಳು ಬಯಲಾಗುತ್ತಿವೆ. ಆದುದರಿಂದ ಇದಕ್ಕೆಲ್ಲ ಒಂದೇ ಪರಿಹಾರ ಭಾರತವನ್ನು ಸವಿಂಧಾನಬದ್ಧವಾಗಿ ಹಿಂದೂರಾಷ್ಟ್ರವೆಂದು ಘೋಷಣೆ ಮಾಡಬೇಕೆಂದು ಅ.13 ರಂದು ಶ್ರೀ ಗುಡ್ರಾಮಲ್ಲೇಶ್ವರ ಸಭಾಗ್ರಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಈ ಪೂರ್ವಭಾವಿ ಸಭೆಯಲ್ಲಿ ಜಯರಾಮ ನೆಲ್ಲಿತ್ತಾಯ ಧಾರ್ಮಿಕ ಮುಂದಾಲು ಹಾಗೂ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿಯ ನಿಕಟಪೂರ್ವ ಅಧ್ಯಕ್ಷ ದಾಮೋದರ ಗೌಡ ಕೊಲೆಚ್ಚಾವು ನಾಲೆಕ್ಕಿ ಗುತ್ತಿನ ಮನೆ, ಹಾಗೂ ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಹಿಂದುತ್ವನಿಷ್ಟರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

ನವೆಂಬರ್ 10 ರಂದು ನಡೆಯಲಿರುವ ಹಿಂದೂ ರಾಷ್ಟ್ರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಧರ್ಮ ಪ್ರೇಮಿಗಳು, ಬಂಧು ಭಗೀನಿಯರು ಭಾಗಿಯಾಗಬೇಕು ಮತ್ತು ಹೆಚ್ಚು ಸಂಖ್ಯೆ ಸೇರಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಭೆಯನ್ನು ಯಶಸ್ವೀಗೊಳಿಸಿ ರಾಷ್ಟ್ರ ಹಾಗೂ ಧರ್ಮದ ಆ ಭಗವಂತನ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಎಂದು ಕರೆ ನೀಡಿದರು.


ಸಮಿತಿಯ ಬಾಲಕೃಷ್ಣ ಗೌಡ, ಯಂ.ಹರೀಶ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಹಿಂದೂ ಜನಜಾಗೃತಿ ಸಮಿತಿ ಸೇವಕ ದಾಮೋದರ ಗೌಡ ಇವರು ಧನ್ಯವಾದವಿತ್ತರು.

Related posts

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya
error: Content is protected !!