31.8 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕದ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ಸನ್ನಿಧಿಯಲ್ಲಿ ನೂತನ ದೇಗುಲಕ್ಕೆ ಸೋಮವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ನೆಕ್ಕರಡ್ಕದಲ್ಲಿ ನೆಲೆಸಿರುವ ಗೋಖಲೆ- ಹೆಬ್ಬಾರ್ ವಂಶಸ್ಥರು ಸುಮಾರು 300 ವರ್ಷಗಳ ಹಿಂದೆ ಈ ದೇವಸ್ಥಾನವನ್ನು ಸ್ಥಾಪಿಸಿ, ಇಂದಿನವರೆಗೂ ಆ ವಂಶಸ್ಥರು ಪೂಜಾ ಕೈಂಕರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ದೇವಸ್ಥಾನವು ಜೀರ್ಣಾವಸ್ಥೆಗೆ ತಲುಪಿದ್ದು ಜೀರ್ಣೋದ್ಧಾರ ಕಾರ್ಯಗಳು ಪ್ರಾರಂಭಗೊಂಡಿವೆ. ಜೀರ್ಣೋದ್ಧಾರದ ಮೊದಲ ಹಂತವಾಗಿ ಇಂದು ವೇದಮೂರ್ತಿ ಸತ್ಯ ಭಟ್ ಬಜಗೋಳಿ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು.

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಕೇಳ್ಕರ್, ನಿವೃತ್ತ ಶಿಕ್ಷಕ ಗೋವಿಂದ ದಾಮಲೆ, ಉಜಿರೆ ಸಂಪೂರ್ಣ ಟೆಕ್ಸ್ ಟೈಲ್ಸ್ ಮಾಲೀಕ ಅನಿಲ್ ಕುಮಾರ್, ಕಳೆಂಜ ಶ್ರೀಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಕಾಯಡ ಶ್ರೀಧರ ರಾವ್, ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಸ್ಥಳೀಯ ಮುಖಂಡರಾದ ಅಡ್ಕಾಡಿ ಧರ್ಮರಾಜ ಗೌಡ, ತಾ.ಪಂ. ಮಾಜಿ ಸದಸ್ಯ ವಾಮನ ತಾಮ್ಹನ್ಕರ್, ಗೋಖಲೆ-ಹೆಬ್ಬಾರ್ ಕುಟುಂಬಸ್ಥರು, ಗ್ರಾಮಸ್ಥರು, ಊರ ಪರವೂರ ಮಹನೀಯರು ಉಪಸ್ಥಿತರಿದ್ದರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya
error: Content is protected !!